ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?
TSK
TSK · ಧರ್ಮೋಪದೇಶಕಾಂಡ 9:7
Treasury of Scripture Knowledge references in ಕನ್ನಡ IRV.
¶ ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.
¶ ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.
¶ ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು.
ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.
ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.
ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.
ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.
ನಿಮ್ಮ ಪೂರ್ವಿಕರು, ಯೆಹೂದದ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?
¶ “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.
ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”
¶ ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.