ವಿಮೋಚನಕಾಂಡ 1:8
TSK
ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.
TSK
Treasury of Scripture Knowledge references in ಕನ್ನಡ IRV.
ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.
ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.
ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ. ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.”
ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ ಬಡವನಿಗೆ ಲಾಭವೇನು?
ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.