¶ ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.
TSK
TSK · ಪ್ರಸಂಗಿ 2:26
Treasury of Scripture Knowledge references in ಕನ್ನಡ IRV.
ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು, ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ,
ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.
ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.
ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.
ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.
‹ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.›
ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
¶ ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.