ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
TSK
TSK · ಪ್ರಸಂಗಿ 3:17
Treasury of Scripture Knowledge references in ಕನ್ನಡ IRV.
¶ ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.
¶ ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.
¶ ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.
¶ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.
ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.
¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›
‹ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.›
ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
¶ ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.
ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.
ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.
¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.