¶ ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.
TSK
TSK · ಪ್ರಸಂಗಿ 3:8
Treasury of Scripture Knowledge references in ಕನ್ನಡ IRV.
ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.
ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.
ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.
ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು.
ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.
ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
¶ ‹“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ›‹ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು›‹ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.›