TSK

TSK · ಪ್ರಸಂಗಿ 4:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.

ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.

ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.

ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.

ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.

ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.

“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.

ಯೆಹೋವನನ್ನು ಅವಲಂಬಿಸಿದ ವಿದೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು’ ಎಂದು ಮಾತನಾಡದಿರಲಿ; ಮತ್ತು ನಪುಂಸಕನು, ‘ಅಯ್ಯೋ, ನಾನು ಗೊಡ್ಡುಮರ’” ಎಂದು ಅಂದುಕೊಳ್ಳದಿರಲಿ.

¶ ‹“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.›

ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.