TSK

TSK · ಪ್ರಸಂಗಿ 5:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.

ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.

ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.

¶ ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.

ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ.

ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.

ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.

¶ ‹“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.›

ಜನರಿಗೆ, ‹“ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ”› ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.