ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೂ ಕುರಿ, ಎತ್ತು, ಕುಟುಂಬಗಳು ಇದ್ದವು.
TSK
TSK · ಪ್ರಸಂಗಿ 5:13
Treasury of Scripture Knowledge references in ಕನ್ನಡ IRV.
¶ ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.
ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ, “ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ;
ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.
ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.
ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.
ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
¶ ಅದೇನೆಂದರೆ ‹“ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.›
¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›
¶ ಯೇಸು ಅದನ್ನು ಕೇಳಿ ಅವನಿಗೆ, ‹“ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.
ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.
¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.