TSK

TSK · ಪ್ರಸಂಗಿ 5:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.

ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.

ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.

ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.

ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.

ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.

¶ ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.

¶ “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.