¶ ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
TSK
TSK · ಪ್ರಸಂಗಿ 5:4
Treasury of Scripture Knowledge references in ಕನ್ನಡ IRV.
ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.
ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.
ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.
ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.
¶ ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.
¶ “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.