ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,
TSK
TSK · ಪ್ರಸಂಗಿ 6:2
Treasury of Scripture Knowledge references in ಕನ್ನಡ IRV.
ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ” ಅಂದರು.
ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.
ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.
ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.
ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.
¶ ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?
¶ ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.
ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.
‹ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.›