¶ ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
TSK
TSK · ಪ್ರಸಂಗಿ 7:29
Treasury of Scripture Knowledge references in ಕನ್ನಡ IRV.
¶ ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.
ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.
¶ “‘ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.
‹ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ”› ಎಂದು ಹೇಳಿದನು.
ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.