¶ ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
TSK
TSK · ಪ್ರಸಂಗಿ 8:1
Treasury of Scripture Knowledge references in ಕನ್ನಡ IRV.
ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.
ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು.
ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು ಅವನಿಗೆ ಮಧ್ಯಸ್ಥನಾಗಿ ಬೇಡುವುದರಿಂದ,
ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು.
ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.
ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.
ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”
¶ ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.
ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ.