TSK

TSK · ಪ್ರಸಂಗಿ 8:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ.

ದುಷ್ಟರು ಬಾಳಿ ವೃದ್ಧರಾಗುವುದಕ್ಕೂ, ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು?

ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ).

ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು ಸೊಕ್ಕಿನವರ ಮೇಲೆ ಉರಿಗೊಂಡೆನು.

ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.

ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.

¶ ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.

ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?