¶ ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.
TSK
TSK · ಪ್ರಸಂಗಿ 8:4
Treasury of Scripture Knowledge references in ಕನ್ನಡ IRV.
ಆಮೇಲೆ ಅರಸನು ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದ್ದರಿಂದ ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.
ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.
ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು?
ಆತನು ರಾಜನಿಗೆ, ‘ನೀನು ಮೂರ್ಖ’ ಪ್ರಭುಗಳಿಗೆ, ‘ನೀವು ಕೆಟ್ಟವರು’ ಎಂದು ಹೇಳಬಲ್ಲನೇ?
ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.
¶ “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
¶ ‹“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.›
¶ ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.