TSK

TSK · ಪ್ರಸಂಗಿ 9:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.

ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!

ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.

ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.

ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.

ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.

¶ ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.

ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?

‹ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,›

‹ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.›

ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.

ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.

ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.