ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
TSK
TSK · ಎಫೆಸದವರಿಗೆ 2:13
Treasury of Scripture Knowledge references in ಕನ್ನಡ IRV.
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,
ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.
ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.
¶ ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.
¶ “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
‹ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’› ಅಂದನು.
ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
¶ ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.
ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.
ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.