ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
TSK
TSK · ಎಫೆಸದವರಿಗೆ 4:6
Treasury of Scripture Knowledge references in ಕನ್ನಡ IRV.
ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?
ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.
ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.
‹ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,›
ಯೇಸು ಅವನಿಗೆ, ‹“ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.›
ಯೇಸು ಆಕೆಗೆ, ‹“ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು”› ಎಂದನು.
“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”
ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.
ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.
¶ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.
ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.