ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು.
TSK
TSK · ಎಸ್ತೇರಳು 1:3
Treasury of Scripture Knowledge references in ಕನ್ನಡ IRV.
ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು.
ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.
ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!
¶ ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.
¶ ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.
ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯ ಮತ್ತು ಪಾರಸಿಯ ರಾಜರು.