ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.
TSK
TSK · ಎಸ್ತೇರಳು 2:9
Treasury of Scripture Knowledge references in ಕನ್ನಡ IRV.
ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.
ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಳಗಳೂ ಅಂತು ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗಬೇಕಾಗಿತ್ತು.
ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.
ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.