TSK

TSK · ಎಸ್ತೇರಳು 3:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು.

ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.

ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು.

¶ ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.

ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.

ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,

ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.