TSK

TSK · ಎಸ್ತೇರಳು 3:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.

¶ ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.

ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.

ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.