¶ ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.
TSK
TSK · ಎಸ್ತೇರಳು 4:1
Treasury of Scripture Knowledge references in ಕನ್ನಡ IRV.
ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ
ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.
¶ ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.
ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.
ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.
¶ “ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.
ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡಿ,
ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.
ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.
ಹೇಗೆಂದರೆ, ‹“ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.›
ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,