TSK

TSK · ಎಸ್ತೇರಳು 4:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.

ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.

ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.

ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.

¶ ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.

ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”

‹ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.›

ಅದಕ್ಕೆ ಪಿಲಾತನು, “ನಾನು ಬರೆದದ್ದು ಬರೆದಾಯಿತು” ಎಂದು ಉತ್ತರ ಕೊಟ್ಟನು.

ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,

ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.

ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.