TSK

TSK · ಎಸ್ತೇರಳು 6:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.

ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು.

ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.

¶ ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

¶ ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.