ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.
TSK
TSK · ಎಸ್ತೇರಳು 7:4
Treasury of Scripture Knowledge references in ಕನ್ನಡ IRV.
ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ” ಎಂದನು.
ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.
ಮೊರ್ದೆಕೈಯು ತನಗೆ ಸಂಭವಿಸಿದ್ದೆಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡುತ್ತೇನೆಂದು ನಿಗದಿಪಡಿಸಿದ ಬೆಳ್ಳಿಯ ಹಣ ಇಷ್ಟೆಂಬುದನ್ನೂ ಅವನಿಗೆ ತಿಳಿಸಿದನು.
ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.
ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.
¶ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.