ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.
TSK
TSK · ಎಸ್ತೇರಳು 7:9
Treasury of Scripture Knowledge references in ಕನ್ನಡ IRV.
ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,
ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.
ಅವರು ಇನ್ನೂ ಅವನೊಡನೆ ಮಾತನಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು ಎಸ್ತೇರಳು ಮಾಡಿಸಿರುವ ಔತಣಕ್ಕೆ ಬೇಗ ಬರಬೇಕೆಂದು ಹಾಮಾನನನ್ನು ಕರೆದೊಯ್ದರು.
ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.
ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವುದು.
ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.
ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು.
ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.