ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.
TSK
TSK · ಎಸ್ತೇರಳು 9:19
Treasury of Scripture Knowledge references in ಕನ್ನಡ IRV.
ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.
ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.
“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.
ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.