TSK

TSK · ಎಸ್ತೇರಳು 9:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.

“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.

ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.

ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.

ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.

ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.