TSK

TSK · ಎಸ್ತೇರಳು 9:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.

ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು.

ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.

¶ ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.