¶ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
TSK
TSK · ವಿಮೋಚನಕಾಂಡ 12:41
Treasury of Scripture Knowledge references in ಕನ್ನಡ IRV.
ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.
ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.
¶ ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
ನಾನು ನಿಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು’” ಅಂದನು.
¶ ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ:
¶ ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.
ತರುವಾಯ ನಾನು ಮೋಶೆ, ಆರೋನರನ್ನೂ ಕಳುಹಿಸಿ, ಆ ಐಗುಪ್ತದಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ, ಅವರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆನು.
ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು.
ಇಸ್ರಾಯೇಲರು ಐಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ,
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
‹ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ”› ಎಂದು ಹೇಳಿದನು.