ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.
TSK
TSK · ವಿಮೋಚನಕಾಂಡ 12:6
Treasury of Scripture Knowledge references in ಕನ್ನಡ IRV.
ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.
¶ “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು.
ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.
ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.
ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.
¶ ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕವನ್ನು ಆಚರಿಸಿದರು.
¶ “ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿನದಲ್ಲಿ, ಏಳು ದಿನದ ಪಸ್ಕಹಬ್ಬವನ್ನು ಆಚರಿಸಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.
ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.
¶ ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.
ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು.
¶ ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.
ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.