ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು.
TSK
TSK · ವಿಮೋಚನಕಾಂಡ 13:3
Treasury of Scripture Knowledge references in ಕನ್ನಡ IRV.
¶ ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.
“ಎಲ್ಲಾ ತಿಂಗಳುಗಳಲ್ಲಿ ಇದೇ ನಿಮಗೆ ಮೊದಲ ತಿಂಗಳಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರುವುದು.
¶ “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.
ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.
ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
¶ “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.
¶ “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?
¶ “ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.
ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.
ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.
ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.
ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.
ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.
ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.
ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು.
ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.
ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,
ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.
ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,
ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.
¶ ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, ‹“ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ”› ಅಂದನು.
‹“ಇದು›‹ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ›‹ಹೀಗೆ ಮಾಡಿರಿ”› ಅಂದನು.