ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು; ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು; ಸಾಗರದಾಳದೊಳಗಿನ ನೀರು ಗಟ್ಟಿಯಾಯಿತು.
TSK
TSK · ವಿಮೋಚನಕಾಂಡ 14:22
Treasury of Scripture Knowledge references in ಕನ್ನಡ IRV.
¶ ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.
ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.
“ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.
ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.
ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.
ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.
ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗರಿಸಲಿಲ್ಲ.
ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.
¶ ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.