ಯೆಹೋವನು ಯುದ್ಧವೀರನು; ಯೆಹೋವ ಎಂಬುದು ಆತನ ನಾಮವಾಗಿದೆ.
TSK
TSK · ವಿಮೋಚನಕಾಂಡ 14:25
Treasury of Scripture Knowledge references in ಕನ್ನಡ IRV.
ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪರವಾಗಿ ಯುದ್ಧಮಾಡುವನು” ಎಂದು ಆಜ್ಞಾಪಿಸಿದೆನು.
ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.
ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.
ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ.
ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, ತಾಮ್ರದ ಬಿಲ್ಲು ಅವನನ್ನು ಇರಿಯುವುದು.
ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.
ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.
ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.
¶ ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.