TSK

TSK · ವಿಮೋಚನಕಾಂಡ 14:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.

ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.

ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.

ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.

ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.

ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.

ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು.

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.

ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.

‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.

ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”

ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ.

ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.

“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.