ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.
TSK
TSK · ವಿಮೋಚನಕಾಂಡ 15:7
Treasury of Scripture Knowledge references in ಕನ್ನಡ IRV.
¶ ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.
ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ
ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.
ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.
ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’
¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.
‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.
ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.
¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
ಅವನು ನೆಲಕ್ಕೆ ಬಿದ್ದನು. ಆಗ, ‹“ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?”› ಎಂದು ಹೇಳುವ ವಾಣಿಯನ್ನು ಕೇಳಿದನು.