TSK

TSK · ವಿಮೋಚನಕಾಂಡ 16:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?

¶ ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?

ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.

ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು

¶ ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.

ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ?

ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.

ಯೆಹೋಶುವನು “ಅಯ್ಯೋ, ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶ ಮಾಡಬೇಕೆಂದಿರುವಿಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು.

ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ,

ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?

ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!

ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.

ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.