TSK

TSK · ವಿಮೋಚನಕಾಂಡ 17:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು.

ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.

ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.

ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬುದಾಗಿ ಕರ್ತನು ಹೇಳುತ್ತಾನೆ’ ಎಂದು ಪ್ರವಾದಿಯು ನುಡಿದಿದ್ದಾನೆ.