TSK

TSK · ವಿಮೋಚನಕಾಂಡ 18:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.

¶ ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.

¶ ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು.

¶ ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.

ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.

(ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.

ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು.

ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.

ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ, ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.

ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, ಚೊಚ್ಚಲ ಮಕ್ಕಳನ್ನು ಸಂಹರಿಸಿದನು.

ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?

ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”

¶ “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.

¶ ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.

ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.