ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.
TSK
TSK · ವಿಮೋಚನಕಾಂಡ 18:16
Treasury of Scripture Knowledge references in ಕನ್ನಡ IRV.
ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
¶ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.
¶ ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.
ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.
ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.
ಒಂದು ವೇಳೆ ನನಗೂ, ನನ್ನ ದಾಸನಿಗೂ, ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ
ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.
¶ ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.