¶ ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.
TSK
TSK · ವಿಮೋಚನಕಾಂಡ 18:21
Treasury of Scripture Knowledge references in ಕನ್ನಡ IRV.
ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.
ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ, ಬುದ್ಧಿವಂತರನ್ನು ಆರಿಸಿಕೊಂಡು ಒಂದೊಂದು ಕುಲದಲ್ಲಿ ಸಾವಿರ ಜನರಿಗೆ ಒಬ್ಬರಂತೆ, ನೂರು ಜನರಿಗೆ ಒಬ್ಬರಂತೆ, ಐವತ್ತು ಜನರಿಗೆ ಒಬ್ಬರಂತೆ ಮತ್ತು ಹತ್ತು ಜನರಿಗೆ ಒಬ್ಬರಂತೆ ಅಧಿಕಾರಿಗಳನ್ನಾಗಿಯೂ ಮತ್ತು ಉಪ ಅಧಿಕಾರಿಗಳನ್ನಾಗಿಯೂ ನೇಮಿಸಿದೆನು.
ಮತ್ತು ಕುಲಕ್ಕೆ ಒಬ್ಬನಂತೆ ಹತ್ತು ಮಂದಿ ನಾಯಕರನ್ನು ಕಳುಹಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.
ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.
¶ ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು.
ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.
ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?
ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.
ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.
ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.
ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.
ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.
ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.
ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.
ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.
ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.
¶ “ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;
‹ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,›
ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.
ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.