ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು.
TSK
TSK · ವಿಮೋಚನಕಾಂಡ 18:23
Treasury of Scripture Knowledge references in ಕನ್ನಡ IRV.
ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.
ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು.
ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.
ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.
ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.