ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
TSK
TSK · ವಿಮೋಚನಕಾಂಡ 19:11
Treasury of Scripture Knowledge references in ಕನ್ನಡ IRV.
ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.
ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.
ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.
ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!
‹ಪರಲೋಕದಿಂದ ಇಳಿದು ಬಂದವನೇ, ಅಂದರೆ,›‹ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.›