TSK

TSK · ವಿಮೋಚನಕಾಂಡ 19:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.

ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.

ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.

ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು.

ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು.

ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.

ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!

ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.