¶ ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.
TSK
TSK · ವಿಮೋಚನಕಾಂಡ 20:12
Treasury of Scripture Knowledge references in ಕನ್ನಡ IRV.
¶ ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.
¶ “‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.
¶ “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.
ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
¶ ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ,
ಆಕೆಯು ಅದೋನೀಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.
ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.
ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.
ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.
¶ “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
‹ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು”› ಇವುಗಳೇ ಅಂದನು.
‹ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ”› ಎಂದು ಹೇಳಿದನು.
ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.