TSK

TSK · ವಿಮೋಚನಕಾಂಡ 20:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?

ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.

ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.

¶ “‘ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.

¶ ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ

ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.

ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ.

ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.

ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.

ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, ‹“ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.›

ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.

ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ.

ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.