TSK

TSK · ವಿಮೋಚನಕಾಂಡ 20:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.

¶ “‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.

ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ. ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ, ಅವನನ್ನು ಎಬ್ಬಿಸಿದ್ದಾನೆಂಬುದನ್ನು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ? ನೀವು ನನ್ನ ಚಿಂತೆಯನ್ನೇ ಬಿಟ್ಟಿದ್ದೀರಿ” ಅಂದನು

ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು.

ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.

ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.

ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.

ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.

ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,