¶ ಇಸಾಕನು, “ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು” ಎಂದು ಕೇಳಿದ್ದಕ್ಕೆ ಅವನು, “ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು” ಎಂದನು.
TSK
TSK · ವಿಮೋಚನಕಾಂಡ 20:7
Treasury of Scripture Knowledge references in ಕನ್ನಡ IRV.
ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.
¶ “ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.
ನಾವು ಇಟ್ಟ ಆಣೆಯ ನಿಮಿತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ನಾವು ಹೀಗೆ ಮಾಡೋಣ, ಅವರನ್ನು ಜೀವದಿಂದ ಉಳಿಸಿ ಬಿಟ್ಟುಬಿಡೋಣ
ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು.
ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ‹“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.›
¶ ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.
¶ ಮುಖ್ಯವಾಗಿ ನನ್ನ ಸಹೋದರರೇ, ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.