TSK

TSK · ವಿಮೋಚನಕಾಂಡ 22:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

¶ “‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.

“ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, ‘ನೀನು ಹೇಳುವುದು ಒಳ್ಳೇಯದು, ಹಾಗೆಯೇ ಮಾಡುತ್ತೇನೆ’ ಎಂದು ಹೇಳಿದಿಯಲ್ಲಾ.

ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.